1 Peter 2:23 in Kannada

Kannada Kannada Bible 1 Peter 1 Peter 2 1 Peter 2:23

1 Peter 2:23
ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.

1 Peter 2:221 Peter 21 Peter 2:24

1 Peter 2:23 in Other Translations

King James Version (KJV)
Who, when he was reviled, reviled not again; when he suffered, he threatened not; but committed himself to him that judgeth righteously:

American Standard Version (ASV)
who, when he was reviled, reviled not again; when he suffered threatened not; but committed `himself' to him that judgeth righteously:

Bible in Basic English (BBE)
To sharp words he gave no sharp answer; when he was undergoing pain, no angry word came from his lips; but he put himself into the hands of the judge of righteousness:

Darby English Bible (DBY)
who, [when] reviled, reviled not again; [when] suffering, threatened not; but gave [himself] over into the hands of him who judges righteously;

World English Bible (WEB)
Who, when he was cursed, didn't curse back. When he suffered, didn't threaten, but committed himself to him who judges righteously;

Young's Literal Translation (YLT)
who being reviled -- was not reviling again, suffering -- was not threatening, and was committing himself to Him who is judging righteously,

Who,
ὃςhosose
when
he
was
reviled,
λοιδορούμενοςloidoroumenosloo-thoh-ROO-may-nose
reviled
again;
οὐκoukook
not
ἀντελοιδόρειanteloidoreian-tay-loo-THOH-ree
when
he
suffered,
πάσχωνpaschōnPA-skone
threatened
he
οὐκoukook
not;
ἠπείλειēpeileiay-PEE-lee
but
παρεδίδουparedidoupa-ray-THEE-thoo
committed
δὲdethay
that
him
to
himself
τῷtoh
judgeth
κρίνοντιkrinontiKREE-none-tee
righteously:
δικαίως·dikaiōsthee-KAY-ose

Cross Reference

Hebrews 12:3
ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.

Isaiah 53:7
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.

Luke 23:46
ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.

Psalm 37:5
ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.

Psalm 10:14
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

Psalm 31:5
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.

Acts 4:29
ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ

2 Timothy 1:12
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.

2 Timothy 4:8
ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.

1 Peter 4:19
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.

Revelation 19:11
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

1 Peter 3:9
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.

2 Thessalonians 1:5
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.

Ephesians 6:9
ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.

Romans 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Acts 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

Acts 9:1
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

Psalm 7:11
ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.

Psalm 38:12
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ.

Psalm 96:13
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.

Matthew 27:39
ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--

Mark 14:60
ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.

Mark 15:29
ಇದ ಲ್ಲದೆ ಹಾದುಹೋಗುತ್ತಿದ್ದವರು ತಮ್ಮ ತಲೆಗಳನ್ನು ಅಲ್ಲಾಡಿಸಿ-ಹಾ! ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,

Luke 22:64
ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.

Luke 23:9
ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.

Luke 23:34
ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

John 8:48
ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.

John 19:9
ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

Acts 7:59
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,

Acts 8:32
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.

Genesis 18:25
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.