Isaiah 5:13 ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
Isaiah 5:13 in Other Translations
King James Version (KJV) Therefore my people are gone into captivity, because they have no knowledge: and their honourable men are famished, and their multitude dried up with thirst.
American Standard Version (ASV) Therefore my people are gone into captivity for lack of knowledge; and their honorable men are famished, and their multitude are parched with thirst.
Bible in Basic English (BBE) For this cause my people are taken away as prisoners into strange countries for need of knowledge: and their rulers are wasted for need of food, and their loud-voiced feasters are dry for need of water.
Darby English Bible (DBY) Therefore my people are led away captive from lack of knowledge, and their nobility die of famine, and their multitude are parched with thirst.
World English Bible (WEB) Therefore my people go into captivity for lack of knowledge; Their honorable men are famished, And their multitudes are parched with thirst.
Young's Literal Translation (YLT) Therefore my people removed without knowledge, And its honourable ones are famished, And its multitude dried up of thirst.
Read Full Chapter :
Isaiah 5
Cross Reference
ಹೋಶೇ 4:6
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
ಯೆಶಾಯ 1:3
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ಯೆಶಾಯ 27:11
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಯೆಶಾಯ 42:22
ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
ಯೆರೆಮಿಯ 8:7
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
ಯೆರೆಮಿಯ 14:3
ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
ಯೆರೆಮಿಯ 14:18
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಪ್ರಲಾಪಗಳು 4:4
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಪ್ರಲಾಪಗಳು 4:9
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
2 ಅರಸುಗಳು 17:6
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
ಮತ್ತಾಯನು 23:16
ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
ಲೂಕನು 19:44
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
ಯೋಹಾನನು 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ರೋಮಾಪುರದವರಿಗೆ 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
2 ಪೇತ್ರನು 3:5
ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
ಆಮೋಸ 8:13
ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.
2 ಪೂರ್ವಕಾಲವೃತ್ತಾ 28:5
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ಯೆಶಾಯ 1:7
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.