Jude 1:3-16 in Kannada
Jude 1:3
ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.
Jude 1:4
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
Jude 1:5
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
Jude 1:6
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
Jude 1:7
ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
Jude 1:8
ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
Jude 1:9
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.
Jude 1:10
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
Jude 1:11
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
Jude 1:12
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
Jude 1:13
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
Jude 1:14
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು
Jude 1:15
ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
Jude 1:16
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
Kannada Bible