1 ತಿಮೊಥೆಯನಿಗೆ 2:4 in Kannada

ಕನ್ನಡ ಕನ್ನಡ ಬೈಬಲ್ 1 ತಿಮೊಥೆಯನಿಗೆ 1 ತಿಮೊಥೆಯನಿಗೆ 2 1 ತಿಮೊಥೆಯನಿಗೆ 2:4

1 Timothy 2:4
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

1 Timothy 2:31 Timothy 21 Timothy 2:5

1 Timothy 2:4 in Other Translations

King James Version (KJV)
Who will have all men to be saved, and to come unto the knowledge of the truth.

American Standard Version (ASV)
who would have all men to be saved, and come to the knowledge of the truth.

Bible in Basic English (BBE)
Whose desire is that all men may have salvation and come to the knowledge of what is true.

Darby English Bible (DBY)
who desires that all men should be saved and come to [the] knowledge of [the] truth.

World English Bible (WEB)
who desires all people to be saved and come to full knowledge of the truth.

Young's Literal Translation (YLT)
who doth will all men to be saved, and to come to the full knowledge of the truth;

Who
ὃςhosose
will
have
πάνταςpantasPAHN-tahs
all
ἀνθρώπουςanthrōpousan-THROH-poos
men
θέλειtheleiTHAY-lee
to
be
saved,
σωθῆναιsōthēnaisoh-THAY-nay
and
καὶkaikay
to
come
εἰςeisees
unto
ἐπίγνωσινepignōsinay-PEE-gnoh-seen
the
knowledge
ἀληθείαςalētheiasah-lay-THEE-as
of
the
truth.
ἐλθεῖνeltheinale-THEEN

Cross Reference

ಯೆಹೆಜ್ಕೇಲನು 18:23
ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?

ಯೆಹೆಜ್ಕೇಲನು 18:32
ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

2 ಪೇತ್ರನು 3:9
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ

ತೀತನಿಗೆ 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

2 ತಿಮೊಥೆಯನಿಗೆ 2:25
ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.

ಯೆಹೆಜ್ಕೇಲನು 33:11
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಲೂಕನು 14:23
ಆಗ ಯಜ ಮಾನನು ಸೇವಕನಿಗೆ--ನೀನು ಬೀದಿಗಳಿಗೂ ಬೇಲಿಗಳ ಬಳಿಗೂ ಹೊರಟುಹೋಗಿ ನನ್ನ ಮನೆ ತುಂಬಿಕೊಳ್ಳುವಂತೆ ಒಳಗೆ ಬರಲು ಅವರನ್ನು ಬಲ ವಂತಮಾಡು;

ಯೋಹಾನನು 3:15
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

ಯೋಹಾನನು 6:37
ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರು ವರು; ನನ್ನ ಬಳಿಗೆ ಬರುವವನನ್ನು ನಾನು ಹೊರಗೆ ತಳ್ಳಿಬಿಡುವದೇ ಇಲ್ಲ.

ಯೋಹಾನನು 14:6
ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ರೋಮಾಪುರದವರಿಗೆ 3:29
ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;

ರೋಮಾಪುರದವರಿಗೆ 10:12
ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.

1 ತಿಮೊಥೆಯನಿಗೆ 4:10
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.

2 ತಿಮೊಥೆಯನಿಗೆ 3:7
ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.

ಇಬ್ರಿಯರಿಗೆ 10:26
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಪ್ರಕಟನೆ 14:6
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.

ಯೆಶಾಯ 45:22
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 53:11
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.

ಯೆಶಾಯ 55:1
ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ.

ಹಬಕ್ಕೂಕ್ಕ 2:14
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಲೂಕನು 1:77
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಯೋಹಾನನು 17:17
ನಿನ್ನ ಸತ್ಯದಿಂದ ಅವರನ್ನು ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು

ತೀತನಿಗೆ 1:1
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ

1 ಥೆಸಲೊನೀಕದವರಿಗೆ 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.

2 ಕೊರಿಂಥದವರಿಗೆ 5:17
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.