ಗಲಾತ್ಯದವರಿಗೆ 3:13 in Kannada

ಕನ್ನಡ ಕನ್ನಡ ಬೈಬಲ್ ಗಲಾತ್ಯದವರಿಗೆ ಗಲಾತ್ಯದವರಿಗೆ 3 ಗಲಾತ್ಯದವರಿಗೆ 3:13

Galatians 3:13
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

Galatians 3:12Galatians 3Galatians 3:14

Galatians 3:13 in Other Translations

King James Version (KJV)
Christ hath redeemed us from the curse of the law, being made a curse for us: for it is written, Cursed is every one that hangeth on a tree:

American Standard Version (ASV)
Christ redeemed us from the curse of the law, having become a curse for us; for it is written, Cursed is every one that hangeth on a tree:

Bible in Basic English (BBE)
Christ has made us free from the curse of the law, having become a curse for us: because it is said in the Writings, A curse on everyone who is put to death by hanging on a tree:

Darby English Bible (DBY)
Christ has redeemed us out of the curse of the law, having become a curse for us, (for it is written, Cursed [is] every one hanged upon a tree,)

World English Bible (WEB)
Christ redeemed us from the curse of the law, having become a curse for us. For it is written, "Cursed is everyone who hangs on a tree,"

Young's Literal Translation (YLT)
Christ did redeem us from the curse of the law, having become for us a curse, for it hath been written, `Cursed is every one who is hanging on a tree,'

Christ
Χριστὸςchristoshree-STOSE
hath
redeemed
ἡμᾶςhēmasay-MAHS
us
ἐξηγόρασενexēgorasenayks-ay-GOH-ra-sane
from
ἐκekake
the
τῆςtēstase
curse
κατάραςkataraska-TA-rahs
the
of
τοῦtoutoo
law,
νόμουnomouNOH-moo
being
made
γενόμενοςgenomenosgay-NOH-may-nose
a
curse
ὑπὲρhyperyoo-PARE
for
ἡμῶνhēmōnay-MONE
us:
κατάραkataraka-TA-ra
for
γέγραπταιgegraptaiGAY-gra-ptay
it
is
written,
γὰρ,gargahr
Cursed
Ἐπικατάρατοςepikataratosay-pee-ka-TA-ra-tose
one
every
is
πᾶςpaspahs
that
hooh
hangeth
κρεμάμενοςkremamenoskray-MA-may-nose
on
ἐπὶepiay-PEE
a
tree:
ξύλουxylouKSYOO-loo

Cross Reference

ಧರ್ಮೋಪದೇಶಕಾಂಡ 21:23
ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

1 ಪೇತ್ರನು 2:24
ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.

ಗಲಾತ್ಯದವರಿಗೆ 4:5
ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.

1 ಯೋಹಾನನು 4:10
ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.

1 ಪೇತ್ರನು 1:18
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

ಇಬ್ರಿಯರಿಗೆ 7:26
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ತೀತನಿಗೆ 2:14
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.

2 ಕೊರಿಂಥದವರಿಗೆ 5:21
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

ಅಪೊಸ್ತಲರ ಕೃತ್ಯಗ 5:30
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.

ಯೆಶಾಯ 55:10
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

ಇಬ್ರಿಯರಿಗೆ 9:15
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

ಇಬ್ರಿಯರಿಗೆ 9:28
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಇಬ್ರಿಯರಿಗೆ 9:12
ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.

1 ಯೋಹಾನನು 2:1
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.

ಪ್ರಕಟನೆ 5:9
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

1 ಪೇತ್ರನು 3:18
ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

ಇಬ್ರಿಯರಿಗೆ 10:4
ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.

2 ಸಮುವೇಲನು 21:3
ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.

ಪ್ರಕಟನೆ 13:8
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.

ಪ್ರಕಟನೆ 1:5
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

ಇಬ್ರಿಯರಿಗೆ 9:26
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.

ಎಫೆಸದವರಿಗೆ 5:2
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಗಲಾತ್ಯದವರಿಗೆ 3:10
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

ರೋಮಾಪುರದವರಿಗೆ 9:3
ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.

ಯೆಶಾಯ 55:5
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.

ಎಸ್ತೇರಳು 9:14
ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.

ಎಸ್ತೇರಳು 7:10
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

2 ಅರಸುಗಳು 22:19
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.

2 ಸಮುವೇಲನು 21:9
ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

2 ಸಮುವೇಲನು 18:14
ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.

2 ಸಮುವೇಲನು 18:10
ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

2 ಸಮುವೇಲನು 17:23
ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.

ಯೆರೆಮಿಯ 44:22
ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.

ಯೆರೆಮಿಯ 49:13
ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.

ರೋಮಾಪುರದವರಿಗೆ 8:3
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 4:25
ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. 

ರೋಮಾಪುರದವರಿಗೆ 3:24
ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

ಮತ್ತಾಯನು 27:5
ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.

ಮತ್ತಾಯನು 26:28
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

ಜೆಕರ್ಯ 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಯೆಹೋಶುವ 10:26
ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.