ಆದಿಕಾಂಡ 49:10 in Kannada

ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 49 ಆದಿಕಾಂಡ 49:10

Genesis 49:10
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

Genesis 49:9Genesis 49Genesis 49:11

Genesis 49:10 in Other Translations

King James Version (KJV)
The sceptre shall not depart from Judah, nor a lawgiver from between his feet, until Shiloh come; and unto him shall the gathering of the people be.

American Standard Version (ASV)
The sceptre shall not depart from Judah, Nor the ruler's staff from between his feet, Until Shiloh come: And unto him shall the obedience of the peoples be.

Bible in Basic English (BBE)
The rod of authority will not be taken from Judah, and he will not be without a law-giver, till he comes who has the right to it, and the peoples will put themselves under his rule.

Darby English Bible (DBY)
The scepter will not depart from Judah, Nor the lawgiver from between his feet, Until Shiloh come, And to him will be the obedience of peoples.

Webster's Bible (WBT)
The scepter shall not depart from Judah, nor a lawgiver from between his feet, until Shiloh shall come: and to him shall be the gathering of the people.

World English Bible (WEB)
The scepter will not depart from Judah, Nor the ruler's staff from between his feet, Until he comes to whom it belongs. To him will the obedience of the peoples be.

Young's Literal Translation (YLT)
The sceptre turneth not aside from Judah, And a lawgiver from between his feet, Till his Seed come; And his `is' the obedience of peoples.

The
sceptre
לֹֽאlōʾloh
shall
not
יָס֥וּרyāsûrya-SOOR
depart
שֵׁ֙בֶט֙šēbeṭSHAY-VET
from
Judah,
מִֽיהוּדָ֔הmîhûdâmee-hoo-DA
lawgiver
a
nor
וּמְחֹקֵ֖קûmĕḥōqēqoo-meh-hoh-KAKE
from
between
מִבֵּ֣יןmibbênmee-BANE
his
feet,
רַגְלָ֑יוraglāywrahɡ-LAV
until
עַ֚דʿadad

כִּֽיkee
Shiloh
יָבֹ֣אyābōʾya-VOH
come;
שִׁילֹ֔הšîlōshee-LOH
gathering
the
shall
him
unto
and
וְל֖וֹwĕlôveh-LOH
of
the
people
יִקְּהַ֥תyiqqĕhatyee-keh-HAHT
be.
עַמִּֽים׃ʿammîmah-MEEM

Cross Reference

ಕೀರ್ತನೆಗಳು 60:7
ಗಿಲ್ಯಾದ್‌ ಮನಸ್ಸೆ ನನ್ನದು; ಎಫ್ರಾಯಾಮ್‌ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;

ಅರಣ್ಯಕಾಂಡ 24:17
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.

ಲೂಕನು 1:32
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.

ಯೆಶಾಯ 42:1
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೆಶಾಯ 9:6
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 33:22
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.

ಯೆಶಾಯ 42:3
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

ಯೆರೆಮಿಯ 23:5
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

ಯೆಹೆಜ್ಕೇಲನು 21:27
ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.

ದಾನಿಯೇಲನು 9:25
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

ಜೆಕರ್ಯ 10:11
ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.

ಕೀರ್ತನೆಗಳು 72:8
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.

ಕೀರ್ತನೆಗಳು 108:8
ಗಿಲ್ಯಾದ್‌ ನನ್ನದು; ಮನಸ್ಸೆ ನನ್ನದು; ಎಫ್ರಾಯಾಮ್‌ ನನ್ನ ತಲೆಯ ಬಲಸ್ಥಾನವು; ಯೆಹೂದವು ನನ್ನ ರಾಜ ದಂಡವಾಗಿದೆ

ಯೆಶಾಯ 11:12
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

ಯೆಶಾಯ 11:10
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 55:4
ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.

ಯೆಶಾಯ 62:11
ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.

ಮತ್ತಾಯನು 1:21
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.

ಮತ್ತಾಯನು 17:5
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.

ಇಬ್ರಿಯರಿಗೆ 7:14
ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.

ಧರ್ಮೋಪದೇಶಕಾಂಡ 28:57
ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.

ಯೋಹಾನನು 12:32
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

ಯೆಶಾಯ 60:1
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಪ್ರಕಟನೆ 11:15
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.

2 ಕೊರಿಂಥದವರಿಗೆ 5:10
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

ಯೆಹೆಜ್ಕೇಲನು 19:14
ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.

ಯೆಹೆಜ್ಕೇಲನು 19:11
ಆಳುವವರ ರಾಜದಂಡ ಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ; ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ; ಹಾಗೆಯೇ ಅದು ತನ್ನ ಎತ್ತರಕ್ಕೆ ಬಹು ಕೊಂಬೆಗಳ ಮಧ್ಯದಲ್ಲಿ ಉದ್ದವಾಗಿ ಕಾಣಬರುತ್ತಿದೆ.

ಯೆರೆಮಿಯ 30:21
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.

ಯೆಶಾಯ 60:3
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.

ಯೆಶಾಯ 11:1
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.

ಯೆಶಾಯ 2:2
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಕೀರ್ತನೆಗಳು 2:6
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.

ಅರಣ್ಯಕಾಂಡ 21:18
ಪ್ರಭುಗಳು ಈ ಬಾವಿಯನ್ನು ಅಗೆದರು; ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು. ಅವರು ಅರಣ್ಯದಿಂದ ಮತ್ತಾನಕ್ಕೂ

ಹಗ್ಗಾಯ 2:7
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 2:11
ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

ಜೆಕರ್ಯ 8:20
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ರೋಮಾಪುರದವರಿಗೆ 15:12
ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.

ಯೋಹಾನನು 19:15
ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

ಯೋಹಾನನು 19:12
ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಈ ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.

ಯೋಹಾನನು 18:31
ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು.

ಯೋಹಾನನು 9:7
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಲೂಕನು 2:30
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.

ಮತ್ತಾಯನು 25:32
ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;

ಮತ್ತಾಯನು 21:9
ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.

ಹೋಶೇ 11:12
ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.

ಯೆಶಾಯ 49:22
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.