ಯೆಶಾಯ 59:15 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 59 ಯೆಶಾಯ 59:15

Isaiah 59:15
ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.

Isaiah 59:14Isaiah 59Isaiah 59:16

Isaiah 59:15 in Other Translations

King James Version (KJV)
Yea, truth faileth; and he that departeth from evil maketh himself a prey: and the LORD saw it, and it displeased him that there was no judgment.

American Standard Version (ASV)
Yea, truth is lacking; and he that departeth from evil maketh himself a prey. And Jehovah saw it, and it displeased him that there was no justice.

Bible in Basic English (BBE)
Yes, faith is gone; and he whose heart is turned from evil comes into the power of the cruel: and the Lord saw it, and he was angry that there was no one to take up their cause.

Darby English Bible (DBY)
And truth faileth; and he that departeth from evil maketh himself a prey. And Jehovah saw [it], and it was evil in his sight that there was no judgment.

World English Bible (WEB)
Yes, truth is lacking; and he who departs from evil makes himself a prey. Yahweh saw it, and it displeased him who there was no justice.

Young's Literal Translation (YLT)
And the truth is lacking, And whoso is turning aside from evil, Is making himself a spoil. And Jehovah seeth, and it is evil in His eyes, That there is no judgment.

Yea,
truth
וַתְּהִ֤יwattĕhîva-teh-HEE
faileth;
הָֽאֱמֶת֙hāʾĕmetha-ay-MET

נֶעְדֶּ֔רֶתneʿderetneh-DEH-ret
departeth
that
he
and
וְסָ֥רwĕsārveh-SAHR
from
evil
מֵרָ֖עmērāʿmay-RA
maketh
himself
a
prey:
מִשְׁתּוֹלֵ֑לmištôlēlmeesh-toh-LALE
Lord
the
and
וַיַּ֧רְאwayyarva-YAHR
saw
יְהוָ֛הyĕhwâyeh-VA
it,
and
it
displeased
וַיֵּ֥רַעwayyēraʿva-YAY-ra

בְּעֵינָ֖יוbĕʿênāywbeh-ay-NAV
him
that
כִּֽיkee
there
was
no
אֵ֥יןʾênane
judgment.
מִשְׁפָּֽט׃mišpāṭmeesh-PAHT

Cross Reference

ಆದಿಕಾಂಡ 38:10
ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.

ಹಬಕ್ಕೂಕ್ಕ 1:13
ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

ಮಾರ್ಕನು 3:21
ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.

ಯೋಹಾನನು 8:52
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;

ಯೋಹಾನನು 10:20
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.

ಅಪೊಸ್ತಲರ ಕೃತ್ಯಗ 9:1
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

ಅಪೊಸ್ತಲರ ಕೃತ್ಯಗ 9:23
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.

ಅಪೊಸ್ತಲರ ಕೃತ್ಯಗ 26:24
ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

ರೋಮಾಪುರದವರಿಗೆ 8:36
ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

2 ಕೊರಿಂಥದವರಿಗೆ 5:13
ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.

ಇಬ್ರಿಯರಿಗೆ 11:36
ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಮಿಕ 7:2
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಹೋಶೇ 9:7
ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

2 ಸಮುವೇಲನು 11:27
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

2 ಅರಸುಗಳು 9:11
ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.

2 ಪೂರ್ವಕಾಲವೃತ್ತಾ 21:7
ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.

ಕೀರ್ತನೆಗಳು 5:9
ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.

ಕೀರ್ತನೆಗಳು 12:1
ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.

ಯೆಶಾಯ 48:1
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆರೆಮಿಯ 5:1
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಯೆರೆಮಿಯ 7:28
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.

ಯೆರೆಮಿಯ 29:26
ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.

ಹೋಶೇ 4:1
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

1 ಯೋಹಾನನು 3:11
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.