ಯೆರೆಮಿಯ 50:11 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 50 ಯೆರೆಮಿಯ 50:11

Jeremiah 50:11
ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ

Jeremiah 50:10Jeremiah 50Jeremiah 50:12

Jeremiah 50:11 in Other Translations

King James Version (KJV)
Because ye were glad, because ye rejoiced, O ye destroyers of mine heritage, because ye are grown fat as the heifer at grass, and bellow as bulls;

American Standard Version (ASV)
Because ye are glad, because ye rejoice, O ye that plunder my heritage, because ye are wanton as a heifer that treadeth out `the grain', and neigh as strong horses;

Bible in Basic English (BBE)
Because you are glad, because you are lifted up with pride, you wasters of my heritage, because you are playing like a young cow put out to grass, and you make a noise like strong horses;

Darby English Bible (DBY)
For ye rejoiced, for ye triumphed, ye plunderers of my heritage; for ye have been wanton as the heifer at grass, and neighed as steeds.

World English Bible (WEB)
Because you are glad, because you rejoice, O you who plunder my heritage, because you are wanton as a heifer that treads out [the grain], and neigh as strong horses;

Young's Literal Translation (YLT)
Because thou rejoicest, because thou exultest, O spoilers of Mine inheritance, Because thou increasest as a heifer `at' the tender grass, And dost cry aloud as bulls,

Because
כִּ֤יkee
ye
were
glad,
תִשְׂמְחיּ֙tiśmĕḥytees-mek-Y
because
כִּ֣יkee
rejoiced,
ye
תַֽעַלְז֔יּtaʿalzyta-al-Z-y
O
ye
destroyers
שֹׁסֵ֖יšōsêshoh-SAY
of
mine
heritage,
נַחֲלָתִ֑יnaḥălātîna-huh-la-TEE
because
כִּ֚יkee
ye
are
grown
fat
תָפ֙וּשׁיּ֙tāpûšyta-FOOSH-Y
heifer
the
as
כְּעֶגְלָ֣הkĕʿeglâkeh-eɡ-LA
at
grass,
דָשָׁ֔הdāšâda-SHA
and
bellow
וְתִצְהֲל֖יּwĕtiṣhălyveh-teets-HUL-y
as
bulls;
כָּאֲבִּרִֽים׃kāʾăbbirîmka-uh-bee-REEM

Cross Reference

ಯೆಶಾಯ 47:6
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.

ಪ್ರಲಾಪಗಳು 2:15
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?

ಪ್ರಲಾಪಗಳು 4:21
ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.

ಯೆಹೆಜ್ಕೇಲನು 25:3
ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ

ಯೆಹೆಜ್ಕೇಲನು 25:15
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.

ಯೆಹೆಜ್ಕೇಲನು 26:2
ಮನುಷ್ಯಪುತ್ರನೇ, ತೂರ್‌, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ

ಹೋಶೇ 10:11
ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.

ಆಮೋಸ 4:1
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.

ಓಬದ್ಯ 1:12
ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;

ಜೆಕರ್ಯ 2:8
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಜೆಕರ್ಯ 14:1
ಇಗೋ, ಕರ್ತನ ದಿನವು ಬರುತ್ತದೆ.

ಜೆಕರ್ಯ 14:12
ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

ಪ್ರಲಾಪಗಳು 1:21
ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.

ಯೆರೆಮಿಯ 51:34
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.

ಕೀರ್ತನೆಗಳು 22:12
ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.

ಕೀರ್ತನೆಗಳು 74:2
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್‌ ಪರ್ವತವನ್ನೂ ಜ್ಞಾಪಕಮಾಡಿಕೋ.

ಕೀರ್ತನೆಗಳು 79:1
1 ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.

ಕೀರ್ತನೆಗಳು 83:1
1 ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.

ಙ್ಞಾನೋಕ್ತಿಗಳು 17:5
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.

ಯೆಶಾಯ 10:6
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.

ಯೆರೆಮಿಯ 5:8
ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.

ಯೆರೆಮಿಯ 5:28
ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.

ಯೆರೆಮಿಯ 46:21
ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.

ಯೆರೆಮಿಯ 50:17
ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.

ಯೆರೆಮಿಯ 50:27
ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.

ಧರ್ಮೋಪದೇಶಕಾಂಡ 32:15
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.