ಯೋಹಾನನು 5:39 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 5 ಯೋಹಾನನು 5:39

John 5:39
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.

John 5:38John 5John 5:40

John 5:39 in Other Translations

King James Version (KJV)
Search the scriptures; for in them ye think ye have eternal life: and they are they which testify of me.

American Standard Version (ASV)
Ye search the scriptures, because ye think that in them ye have eternal life; and these are they which bear witness of me;

Bible in Basic English (BBE)
You make search in the holy Writings, in the belief that through them you get eternal life; and it is those Writings which give witness about me.

Darby English Bible (DBY)
Ye search the scriptures, for ye think that in them ye have life eternal, and they it is which bear witness concerning me;

World English Bible (WEB)
"You search the Scriptures, because you think that in them you have eternal life; and these are they which testify about me.

Young's Literal Translation (YLT)
`Ye search the Writings, because ye think in them to have life age-during, and these are they that are testifying concerning me;

Search
ἐρευνᾶτεereunateay-rave-NA-tay
the
τὰςtastahs
scriptures;
γραφάςgraphasgra-FAHS
for
ὅτιhotiOH-tee
in
ὑμεῖςhymeisyoo-MEES
them
δοκεῖτεdokeitethoh-KEE-tay
ye
ἐνenane
think
αὐταῖςautaisaf-TASE
ye
have
ζωὴνzōēnzoh-ANE
eternal
αἰώνιονaiōnionay-OH-nee-one
life:
ἔχειν·echeinA-heen
and
καὶkaikay
they
ἐκεῖναίekeinaiake-EE-NAY
are
εἰσινeisinees-een

αἱhaiay
testify
which
they
μαρτυροῦσαιmartyrousaimahr-tyoo-ROO-say
of
περὶperipay-REE
me.
ἐμοῦ·emouay-MOO

Cross Reference

ಲೂಕನು 24:27
ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.

2 ಪೇತ್ರನು 1:19
ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.

ಯೆಶಾಯ 34:16
ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು

ಲೂಕನು 24:44
ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

1 ಪೇತ್ರನು 1:10
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

2 ತಿಮೊಥೆಯನಿಗೆ 3:14
ನೀನಾದರೋ ಕಲಿತು ದೃಢವಾಗಿ ನಂಬಿದವುಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು.

ಅಪೊಸ್ತಲರ ಕೃತ್ಯಗ 26:22
ಹೀಗೆ ನಾನು ದೇವರ ಸಹಾಯವನ್ನು ಹೊಂದಿ ಈ ದಿವಸದವರೆಗೆ ಜೀವದಿಂದಿದ್ದು ಪ್ರವಾದಿಗಳೂ ಮೋಶೆಯೂ ಸಂಭವಿಸುವವೆಂದು ಹೇಳಿದವುಗಳನ್ನೇ ಹೊರತು ಮತ್ತೆ ಯಾವ ವಿಷಯಗಳನ್ನೂ ಹೇಳದೆ ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷೀಕರಿಸುವವ ನಾಗಿದ್ದೇನೆ.

ಅಪೊಸ್ತಲರ ಕೃತ್ಯಗ 13:27
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್‌ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.

ಅಪೊಸ್ತಲರ ಕೃತ್ಯಗ 17:11
ಅಲ್ಲಿಯವರು ಥೆಸಲೊನೀಕದವರಿಗಿಂತ ಸದ್ಗುಣ ವುಳ್ಳವರಾಗಿದ್ದು ವಾಕ್ಯವನ್ನು ಸಿದ್ಧಮನಸ್ಸಿನಿಂದ ಅಂಗೀ ಕರಿಸಿ ಇವರು ಹೇಳುವ ಮಾತುಗಳು ಹೌದೋ ಏನೋ ಎಂದು ಪ್ರತಿದಿನವೂ ಬರಹಗಳನ್ನು ಶೋಧಿ ಸುತ್ತಿದ್ದರು.

ರೋಮಾಪುರದವರಿಗೆ 1:2
(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).

ಙ್ಞಾನೋಕ್ತಿಗಳು 8:33
ಶಿಕ್ಷಣವನ್ನು ಕೇಳಿ ಅದನ್ನು ತಿರಸ್ಕರಿಸದೇ ಜ್ಞಾನವಂತರಾಗಿರ್ರಿ.

ಕೀರ್ತನೆಗಳು 119:97
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.

ಯೆರೆಮಿಯ 8:9
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?

ರೋಮಾಪುರದವರಿಗೆ 3:2
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.

ಧರ್ಮೋಪದೇಶಕಾಂಡ 18:15
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--

ಕೀರ್ತನೆಗಳು 16:11
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಮತ್ತಾಯನು 22:29
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.

ಮಾರ್ಕನು 12:10
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಯೋಹಾನನು 5:46
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.

ಅಪೊಸ್ತಲರ ಕೃತ್ಯಗ 8:32
ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ.

ಙ್ಞಾನೋಕ್ತಿಗಳು 6:23
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.

ಪ್ರಕಟನೆ 19:10
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

ಅಪೊಸ್ತಲರ ಕೃತ್ಯಗ 26:27
ರಾಜನಾದ ಅಗ್ರಿಪ್ಪನೇ, ಪ್ರವಾದಿ ಗಳನ್ನು ನೀನು ನಂಬುತ್ತೀಯೋ? ನೀನು ನಂಬುತ್ತೀ ಯೆಂದು ನಾನು ಬಲ್ಲೆನು ಎಂದು ಹೇಳಿದನು.

ಯೋಹಾನನು 7:52
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.

ಯೋಹಾನನು 5:36
ಆದರೆ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿ ನನಗುಂಟು; ಹೇಗೆಂದರೆ ಪೂರೈಸುವದಕ್ಕಾಗಿ ತಂದೆಯು ನನಗೆ ಕೊಟ್ಟ ಕೆಲಸಗಳು ಅಂದರೆ ನಾನು ಮಾಡುತ್ತಿರುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಧರ್ಮೋಪದೇಶಕಾಂಡ 11:18
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.

ಧರ್ಮೋಪದೇಶಕಾಂಡ 32:47
ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.

ಯೆಹೋಶುವ 1:8
ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.

ಕೀರ್ತನೆಗಳು 36:9
ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.

ಕೀರ್ತನೆಗಳು 119:11
ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.

ಲೂಕನು 16:29
ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು.

ಲೂಕನು 16:31
ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಯೋಹಾನನು 1:45
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.

ಯೋಹಾನನು 5:32
ನನ್ನನ್ನು ಕುರಿತು ಸಾಕ್ಷಿಕೊಡುವಾತನು ಬೇರೊಬ್ಬನಿ ದ್ದಾನೆ; ಆತನು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.

ಯೆಶಾಯ 8:20
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.

ಕೀರ್ತನೆಗಳು 133:3
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

ಕೀರ್ತನೆಗಳು 21:4
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.

ಕೀರ್ತನೆಗಳು 1:2
ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.

ಧರ್ಮೋಪದೇಶಕಾಂಡ 18:18
ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.

ದಾನಿಯೇಲನು 12:2
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಮತ್ತಾಯನು 19:16
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

ಲೂಕನು 10:25
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ರೋಮಾಪುರದವರಿಗೆ 2:17
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು

ಕೊಲೊಸ್ಸೆಯವರಿಗೆ 3:16
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

ಇಬ್ರಿಯರಿಗೆ 11:16
ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.

ಇಬ್ರಿಯರಿಗೆ 11:35
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ಧರ್ಮೋಪದೇಶಕಾಂಡ 17:18
ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.