ಯೆಹೆಜ್ಕೇಲನು 14:19 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 14 ಯೆಹೆಜ್ಕೇಲನು 14:19

Ezekiel 14:19
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

Ezekiel 14:18Ezekiel 14Ezekiel 14:20

Ezekiel 14:19 in Other Translations

King James Version (KJV)
Or if I send a pestilence into that land, and pour out my fury upon it in blood, to cut off from it man and beast:

American Standard Version (ASV)
Or if I send a pestilence into that land, and pour out my wrath upon it in blood, to cut off from it man and beast;

Bible in Basic English (BBE)
Or if I send disease into that land, letting loose my wrath on it in blood, cutting off from it man and beast:

Darby English Bible (DBY)
Or [if] I send a pestilence into that land, and pour out my fury upon it in blood, to cut off from it man and beast,

World English Bible (WEB)
Or if I send a pestilence into that land, and pour out my wrath on it in blood, to cut off from it man and animal;

Young's Literal Translation (YLT)
`Or -- pestilence I send unto that land, and I have poured out My fury against it in blood, to cut off from it man and beast --

Or
א֛וֹʾôoh
if
I
send
דֶּ֥בֶרdeberDEH-ver
a
pestilence
אֲשַׁלַּ֖חʾăšallaḥuh-sha-LAHK
into
אֶלʾelel
that
הָאָ֣רֶץhāʾāreṣha-AH-rets
land,
הַהִ֑יאhahîʾha-HEE
and
pour
out
וְשָׁפַכְתִּ֨יwĕšāpaktîveh-sha-fahk-TEE
fury
my
חֲמָתִ֤יḥămātîhuh-ma-TEE
upon
עָלֶ֙יהָ֙ʿālêhāah-LAY-HA
it
in
blood,
בְּדָ֔םbĕdāmbeh-DAHM
off
cut
to
לְהַכְרִ֥יתlĕhakrîtleh-hahk-REET
from
מִמֶּ֖נָּהmimmennâmee-MEH-na
it
man
אָדָ֥םʾādāmah-DAHM
and
beast:
וּבְהֵמָֽה׃ûbĕhēmâoo-veh-hay-MA

Cross Reference

ಯೆಹೆಜ್ಕೇಲನು 38:22
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.

ಯೆಹೆಜ್ಕೇಲನು 7:8
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.

ಯೆಹೆಜ್ಕೇಲನು 5:12
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

ಯೆರೆಮಿಯ 14:12
ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

2 ಸಮುವೇಲನು 24:15
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.

ಯೆರೆಮಿಯ 21:9
ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;

ಯೆರೆಮಿಯ 24:10
ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.

ಯೆಹೆಜ್ಕೇಲನು 36:18
ಆದದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷ ವನ್ನು ಅವರ ಮೇಲೆ ಸುರಿಸಿದೆನು.

ಆಮೋಸ 4:10
ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಮತ್ತಾಯನು 24:7
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

ಪ್ರಕಟನೆ 16:3
ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.

ಯೆರೆಮಿಯ 21:6
ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.

ಯೆಶಾಯ 37:36
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ಅರಣ್ಯಕಾಂಡ 16:46
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

ಧರ್ಮೋಪದೇಶಕಾಂಡ 28:21
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.

ಧರ್ಮೋಪದೇಶಕಾಂಡ 28:59
ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.

2 ಸಮುವೇಲನು 24:13
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.

1 ಅರಸುಗಳು 8:37
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

2 ಪೂರ್ವಕಾಲವೃತ್ತಾ 6:28
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ

2 ಪೂರ್ವಕಾಲವೃತ್ತಾ 7:13
ಮಳೆ ಇಲ್ಲದ ಹಾಗೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದು ಬಿಡಲು ಮಿಡಿತೆಗಳಿಗೆ ಆಜ್ಞಾಪಿಸಿದರೂ

2 ಪೂರ್ವಕಾಲವೃತ್ತಾ 20:9
ನಿನ್ನ ಹೆಸರು ಈ ಆಲಯದಲ್ಲಿರುವದರಿಂದ ಕತ್ತಿಯೂ ನ್ಯಾಯತೀರಿಸುವ ಶಿಕ್ಷೆಯೂ ಜಾಡ್ಯವೂ ಬರವೂ ಏನಾದರೂ ನಮ್ಮ ಮೇಲೆ ಬಂದರೆ ನಾವು ಈ ಆಲಯದ ಮುಂದೆಯೂ ನಿನ್ನ ಸಮ್ಮುಖದಲ್ಲಿಯೂ ನಿಂತು ನಮ್ಮ ಇಕ್ಕಟ್ಟಿನಲ್ಲಿ ನಿನ್ನನ್ನು ಕೂಗುವಾಗ ನೀನು ಕೇಳಿ ರಕ್ಷಿಸುವವನಾಗಿದ್ದೀ ಎಂದು ಹೇಳಿದರು.

ಕೀರ್ತನೆಗಳು 91:3
ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

ಕೀರ್ತನೆಗಳು 91:6
ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.

ಅರಣ್ಯಕಾಂಡ 14:12
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.