ಯೆಶಾಯ 27:11 in Kannada

ಕನ್ನಡ ಕನ್ನಡ ಬೈಬಲ್ ಯೆಶಾಯ ಯೆಶಾಯ 27 ಯೆಶಾಯ 27:11

Isaiah 27:11
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.

Isaiah 27:10Isaiah 27Isaiah 27:12

Isaiah 27:11 in Other Translations

King James Version (KJV)
When the boughs thereof are withered, they shall be broken off: the women come, and set them on fire: for it is a people of no understanding: therefore he that made them will not have mercy on them, and he that formed them will shew them no favour.

American Standard Version (ASV)
When the boughs thereof are withered, they shall be broken off; the women shall come, and set them on fire; for it is a people of no understanding: therefore he that made them will not have compassion upon them, and he that formed them will show them no favor.

Bible in Basic English (BBE)
When its branches are dry they will be broken off; the women will come and put fire to them: for it is a foolish people; for this cause he who made them will have no mercy on them, and he whose work they are will not have pity on them.

Darby English Bible (DBY)
When its branches are withered they shall be broken off; women shall come [and] set them on fire. For it is a people of no intelligence; therefore he that made them will not have mercy on them, and he who formed them will shew them no favour.

World English Bible (WEB)
When the boughs of it are withered, they shall be broken off; the women shall come, and set them on fire; for it is a people of no understanding: therefore he who made them will not have compassion on them, and he who formed them will show them no favor.

Young's Literal Translation (YLT)
In the withering of its branch it is broken off, Women are coming in setting it on fire, For it `is' not a people of understanding, Therefore pity it not doth its Maker, And its Former doth not favour it.

When
the
boughs
בִּיבֹ֤שׁbîbōšbee-VOHSH
thereof
are
withered,
קְצִירָהּ֙qĕṣîrāhkeh-tsee-RA
off:
broken
be
shall
they
תִּשָּׁבַ֔רְנָהtiššābarnâtee-sha-VAHR-na
the
women
נָשִׁ֕יםnāšîmna-SHEEM
come,
בָּא֖וֹתbāʾôtba-OTE
and
set
them
on
fire:
מְאִיר֣וֹתmĕʾîrôtmeh-ee-ROTE

אוֹתָ֑הּʾôtāhoh-TA
for
כִּ֣יkee
it
is
a
people
לֹ֤אlōʾloh
no
of
עַםʿamam
understanding:
בִּינוֹת֙bînôtbee-NOTE
therefore
ה֔וּאhûʾhoo

עַלʿalal
he
כֵּן֙kēnkane
that
made
לֹֽאlōʾloh
not
will
them
יְרַחֲמֶ֣נּוּyĕraḥămennûyeh-ra-huh-MEH-noo
have
mercy
עֹשֵׂ֔הוּʿōśēhûoh-SAY-hoo
formed
that
he
and
them,
on
וְיֹצְר֖וֹwĕyōṣĕrôveh-yoh-tseh-ROH
them
will
shew
them
no
favour.
לֹ֥אlōʾloh
יְחֻנֶּֽנּוּ׃yĕḥunnennûyeh-hoo-NEH-noo

Cross Reference

ಯೆರೆಮಿಯ 8:7
ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.

ಯೆಶಾಯ 44:24
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

ಯೆಶಾಯ 43:7
ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

ಯೆಶಾಯ 43:1
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಯೆಶಾಯ 1:3
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.

ಮತ್ತಾಯನು 3:10
ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಮತ್ತಾಯನು 13:15
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ

ಮತ್ತಾಯನು 13:19
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

ಯೋಹಾನನು 15:6
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

ರೋಮಾಪುರದವರಿಗೆ 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

ರೋಮಾಪುರದವರಿಗೆ 1:31
ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.

1 ಥೆಸಲೊನೀಕದವರಿಗೆ 2:16
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.

2 ಥೆಸಲೊನೀಕದವರಿಗೆ 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಯಾಕೋಬನು 2:13
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.

ಹೋಶೇ 4:6
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ಯೆಹೆಜ್ಕೇಲನು 20:47
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.

ಯೆಹೆಜ್ಕೇಲನು 15:2
ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?

ಧರ್ಮೋಪದೇಶಕಾಂಡ 4:6
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.

ಧರ್ಮೋಪದೇಶಕಾಂಡ 32:18
ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.

ಧರ್ಮೋಪದೇಶಕಾಂಡ 32:28
ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.

2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಕೀರ್ತನೆಗಳು 80:15
ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.

ಕೀರ್ತನೆಗಳು 106:40
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು

ಯೆಶಾಯ 9:17
ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.

ಯೆಶಾಯ 44:2
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.

ಯೆಶಾಯ 44:18
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆರೆಮಿಯ 4:22
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.

ಯೆರೆಮಿಯ 5:4
ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.

ಯೆರೆಮಿಯ 5:21
ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.

ಯೆಹೆಜ್ಕೇಲನು 9:10
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.

ಆದಿಕಾಂಡ 6:6
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.