ಲೂಕನು 19:42 in Kannada

ಕನ್ನಡ ಕನ್ನಡ ಬೈಬಲ್ ಲೂಕನು ಲೂಕನು 19 ಲೂಕನು 19:42

Luke 19:42
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.

Luke 19:41Luke 19Luke 19:43

Luke 19:42 in Other Translations

King James Version (KJV)
Saying, If thou hadst known, even thou, at least in this thy day, the things which belong unto thy peace! but now they are hid from thine eyes.

American Standard Version (ASV)
saying, If thou hadst known in this day, even thou, the things which belong unto peace! but now they are hid from thine eyes.

Bible in Basic English (BBE)
Saying, If you, even you, had knowledge today, of the things which give peace! but you are not able to see them.

Darby English Bible (DBY)
saying, If thou hadst known, even thou, even at least in this thy day, the things that are for thy peace: but now they are hid from thine eyes;

World English Bible (WEB)
saying, "If you, even you, had known today the things which belong to your peace! But now, they are hidden from your eyes.

Young's Literal Translation (YLT)
saying -- `If thou didst know, even thou, at least in this thy day, the things for thy peace; but now they were hid from thine eyes.

Saying,
λέγωνlegōnLAY-gone

ὅτιhotiOH-tee
If
Εἰeiee
thou
hadst
known,
ἔγνωςegnōsA-gnose
even
καὶkaikay
thou,
σὺsysyoo
at
καὶkaikay
least
γεgegay
in
ἐνenane
this
τῇtay
thy
ἡμέρᾳhēmeraay-MAY-ra
day,
σουsousoo
the
ταύτῃtautēTAF-tay
things
τὰtata
which
belong
unto
πρὸςprosprose
thy
εἰρήνηνeirēnēnee-RAY-nane
peace!
σου·sousoo
but
νῦνnynnyoon
now
δὲdethay
they
are
hid
ἐκρύβηekrybēay-KRYOO-vay
from
ἀπὸapoah-POH
thine
ὀφθαλμῶνophthalmōnoh-fthahl-MONE
eyes.
σου·sousoo

Cross Reference

ಧರ್ಮೋಪದೇಶಕಾಂಡ 32:29
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

ಮತ್ತಾಯನು 13:14
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ಅಪೊಸ್ತಲರ ಕೃತ್ಯಗ 10:36
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್‌ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗ 28:25
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--

ರೋಮಾಪುರದವರಿಗೆ 11:7
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

2 ಕೊರಿಂಥದವರಿಗೆ 3:14
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

2 ಕೊರಿಂಥದವರಿಗೆ 4:3
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.

2 ಕೊರಿಂಥದವರಿಗೆ 6:1
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

2 ಥೆಸಲೊನೀಕದವರಿಗೆ 2:9
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ

ಇಬ್ರಿಯರಿಗೆ 3:7
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ

ಇಬ್ರಿಯರಿಗೆ 3:13
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.

ಇಬ್ರಿಯರಿಗೆ 3:15
ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.

ಇಬ್ರಿಯರಿಗೆ 10:26
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಇಬ್ರಿಯರಿಗೆ 12:24
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಯೋಹಾನನು 12:38
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.

ಯೋಹಾನನು 12:35
ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಧರ್ಮೋಪದೇಶಕಾಂಡ 5:29
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

ಕೀರ್ತನೆಗಳು 32:6
ಇದಕ್ಕೋಸ್ಕರ ಭಕ್ತರೆಲ್ಲರು ನಿನ್ನನ್ನು ಕಂಡುಕೊಳ್ಳುವ ಕಾಲದಲ್ಲಿ ನಿನಗೆ ಪ್ರಾರ್ಥನೆ ಮಾಡುವರು; ನಿಶ್ಚಯವಾಗಿ ಬಹಳ ನೀರಿನ ಪ್ರವಾಹ ಗಳು ಅವನ ಸವಿಾಪಕ್ಕೆ ಬರುವದಿಲ್ಲ.

ಕೀರ್ತನೆಗಳು 95:7
ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ

ಯೆಶಾಯ 6:9
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 29:10
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.

ಯೆಶಾಯ 44:18
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆಶಾಯ 48:18
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;

ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆಹೆಜ್ಕೇಲನು 18:31
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?

ಯೆಹೆಜ್ಕೇಲನು 33:11
ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಲೂಕನು 1:77
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು.

ಲೂಕನು 2:10
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

ಲೂಕನು 10:5
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.

ಲೂಕನು 19:44
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

ಕೀರ್ತನೆಗಳು 81:13
ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,