Malachi 3:16 ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
Malachi 3:16 in Other Translations
King James Version (KJV) Then they that feared the LORD spake often one to another: and the LORD hearkened, and heard it, and a book of remembrance was written before him for them that feared the LORD, and that thought upon his name.
American Standard Version (ASV) Then they that feared Jehovah spake one with another; and Jehovah hearkened, and heard, and a book of remembrance was written before him, for them that feared Jehovah, and that thought upon his name.
Bible in Basic English (BBE) Then those in whom was the fear of the Lord had talk together: and the Lord gave ear, and it was recorded in a book to be kept in mind before him, for those who had the fear of the Lord and gave thought to his name.
Darby English Bible (DBY) Then they that feared Jehovah spoke often one to another; and Jehovah observed [it], and heard, and a book of remembrance was written before him for them that feared Jehovah, and that thought upon his name.
World English Bible (WEB) Then those who feared Yahweh spoke one with another; and Yahweh listened, and heard, and a book of memory was written before him, for those who feared Yahweh, and who honored his name.
Young's Literal Translation (YLT) Then have those fearing Jehovah spoken one to another, And Jehovah doth attend and hear, And written is a book of memorial before Him Of those fearing Jehovah, And of those esteeming His name.
Read Full Chapter :
Malachi 3
Cross Reference
ಕೀರ್ತನೆಗಳು 56:8
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ಪ್ರಕಟನೆ 20:12
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
1 ಸಮುವೇಲನು 23:16
ಆಗ ಸೌಲನ ಮಗನಾದ ಯೋನಾತಾನನು ಎದ್ದು ಅರಣ್ಯದಲ್ಲಿರುವ ದಾವೀದನ ಬಳಿಗೆ ಹೋಗಿ ದೇವರಲ್ಲಿ ಅವನ ಕೈಯನ್ನು ಬಲಪಡಿಸಿ ಅವನಿಗೆ--ಭಯಪಡಬೇಡ;
2 ಸಮುವೇಲನು 7:1
ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
1 ಅರಸುಗಳು 18:3
ಆಗ ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. (ಓಬದ್ಯನು ಕರ್ತನಿಗೆ ಬಹಳ ಭಯಪಡುವವನಾಗಿದ್ದನು.
1 ಅರಸುಗಳು 18:12
ನಾನು ನಿನ್ನನ್ನು ಬಿಟ್ಟು ಹೋಗುವಾಗ ಆಗುವದೇನಂದರೆ, ಕರ್ತನ ಆತ್ಮನು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯು ವನು. ನಾನು ಬಂದು ಅಹಾಬನಿಗೆ ತಿಳಿಸಿದಾಗ ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕು ವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕತನ ದಿಂದ ಕರ್ತನಿಗೆ ಭಯಪಡುತ್ತೇನೆ.
2 ಪೂರ್ವಕಾಲವೃತ್ತಾ 6:7
ಆದಕಾರಣ ಇಸ್ರಾಯೇಲಿನ ದೇವರಾದ ಕರ್ತನ ಹೆಸರಿಗೆ ಆಲಯ ವನ್ನು ಕಟ್ಟಿಸಲು ನನ್ನ ತಂದೆಯಾದ ದಾವೀದನಿಗೆ ಮನಸ್ಸಿತ್ತು.
ಎಸ್ತೇರಳು 2:23
ಈ ವಿಷಯವನ್ನು ವಿಚಾರಿಸಿದಾಗ ನಿಜವಾಯಿತು; ಆಗ ಅವರಿಬ್ಬರೂ ಮರದಲ್ಲಿ ತೂಗುಹಾಕಲ್ಪಟ್ಟರು. ಇದು ಅರಸನ ಮುಂದೆ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿತು.
ಎಸ್ತೇರಳು 4:5
ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.
ಎಸ್ತೇರಳು 6:1
ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
ಯೋಬನು 19:23
ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
ಯೋಬನು 28:28
ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
ಕೀರ್ತನೆಗಳು 10:4
ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.
ಕೀರ್ತನೆಗಳು 16:3
ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
ಕೀರ್ತನೆಗಳು 20:7
ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
ಕೀರ್ತನೆಗಳು 33:18
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
ಕೀರ್ತನೆಗಳು 34:15
ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.
ಕೀರ್ತನೆಗಳು 66:16
ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
ಕೀರ್ತನೆಗಳು 73:15
ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು.
ಕೀರ್ತನೆಗಳು 94:19
ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
ಕೀರ್ತನೆಗಳು 104:33
ನಾನು ಜೀವಿತಕಾಲವೆಲ್ಲಾ ಕರ್ತನಿಗೆ ಹಾಡು ವೆನು ನಾನು ಇರುವ ವರೆಗೆ ದೇವರನ್ನು ಕೀರ್ತಿಸುವೆನು.
ಕೀರ್ತನೆಗಳು 111:10
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಕೀರ್ತನೆಗಳು 119:63
ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
ಕೀರ್ತನೆಗಳು 139:4
ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
ಕೀರ್ತನೆಗಳು 147:11
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
ಙ್ಞಾನೋಕ್ತಿಗಳು 13:20
ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
ಯೆಶಾಯ 26:3
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಯೆಶಾಯ 26:8
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಯೆಶಾಯ 50:10
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.
ಯೆಶಾಯ 65:6
ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
ಯೆಹೆಜ್ಕೇಲನು 9:4
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ದಾನಿಯೇಲನು 2:17
ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
ದಾನಿಯೇಲನು 7:10
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಮಲಾಕಿಯ 3:5
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಮತ್ತಾಯನು 12:35
ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
ಮತ್ತಾಯನು 18:19
ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
ಲೂಕನು 2:38
ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ಲೂಕನು 24:14
ಅವರು ನಡೆದ ಈ ಎಲ್ಲಾ ವಿಷಯಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿ ಕೊಳ್ಳುತ್ತಿದ್ದರು.
ಯೋಹಾನನು 1:40
ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
ಯೋಹಾನನು 12:20
ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ಅಪೊಸ್ತಲರ ಕೃತ್ಯಗ 1:13
ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 2:1
ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ಅಪೊಸ್ತಲರ ಕೃತ್ಯಗ 4:23
ಅವರು ಬಿಡುಗಡೆ ಹೊಂದಿಕೊಂಡು ತಮ್ಮ ಸ್ವಂತ ಜನರ ಬಳಿಗೆ ಹೋಗಿ ಪ್ರಧಾನಯಾಜಕರೂ ಹಿರಿಯರೂ ತಮಗೆ ಹೇಳಿದ್ದೆಲ್ಲವನ್ನು ಅವರಿಗೆ ತಿಳಿಸಿದರು.
ಅಪೊಸ್ತಲರ ಕೃತ್ಯಗ 9:31
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ಅಪೊಸ್ತಲರ ಕೃತ್ಯಗ 10:2
ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
ಎಫೆಸದವರಿಗೆ 5:19
ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
1 ಥೆಸಲೊನೀಕದವರಿಗೆ 5:11
ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿ ಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.
ಇಬ್ರಿಯರಿಗೆ 3:13
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಇಬ್ರಿಯರಿಗೆ 4:12
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಇಬ್ರಿಯರಿಗೆ 10:24
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
ಇಬ್ರಿಯರಿಗೆ 12:15
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ಪ್ರಕಟನೆ 15:4
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
1 ಥೆಸಲೊನೀಕದವರಿಗೆ 5:14
ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಧರ್ಮೋಪದೇಶಕಾಂಡ 6:6
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
ಆದಿಕಾಂಡ 22:12
ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.