ಮತ್ತಾಯನು 25:41 in Kannada

ಕನ್ನಡ ಕನ್ನಡ ಬೈಬಲ್ ಮತ್ತಾಯನು ಮತ್ತಾಯನು 25 ಮತ್ತಾಯನು 25:41

Matthew 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.

Matthew 25:40Matthew 25Matthew 25:42

Matthew 25:41 in Other Translations

King James Version (KJV)
Then shall he say also unto them on the left hand, Depart from me, ye cursed, into everlasting fire, prepared for the devil and his angels:

American Standard Version (ASV)
Then shall he say also unto them on the left hand, Depart from me, ye cursed, into the eternal fire which is prepared for the devil and his angels:

Bible in Basic English (BBE)
Then will he say to those on the left, Go from me, you cursed ones, into the eternal fire which is ready for the Evil One and his angels:

Darby English Bible (DBY)
Then shall he say also to those on the left, Go from me, cursed, into eternal fire, prepared for the devil and his angels:

World English Bible (WEB)
Then he will say also to those on the left hand, 'Depart from me, you cursed, into the eternal fire which is prepared for the devil and his angels;

Young's Literal Translation (YLT)
Then shall he say also to those on the left hand, Go ye from me, the cursed, to the fire, the age-during, that hath been prepared for the Devil and his messengers;

Then
ΤότεtoteTOH-tay
shall
he
say
ἐρεῖereiay-REE
also
καὶkaikay
unto
them
τοῖςtoistoos
on
ἐξexayks
hand,
left
the
εὐωνύμωνeuōnymōnave-oh-NYOO-mone
Depart
Πορεύεσθεporeuesthepoh-RAVE-ay-sthay
from
ἀπ'apap
me,
ἐμοῦemouay-MOO

οἱhoioo
cursed,
ye
κατηραμένοιkatēramenoika-tay-ra-MAY-noo
into
εἰςeisees

τὸtotoh
everlasting
πῦρpyrpyoor

τὸtotoh
fire,
αἰώνιονaiōnionay-OH-nee-one

τὸtotoh
prepared
ἡτοιμασμένονhētoimasmenonay-too-ma-SMAY-none
for
the
τῷtoh
devil
διαβόλῳdiabolōthee-ah-VOH-loh
and
καὶkaikay
his
τοῖςtoistoos

ἀγγέλοιςangeloisang-GAY-loos
angels:
αὐτοῦautouaf-TOO

Cross Reference

ಯೂದನು 1:6
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

2 ಪೇತ್ರನು 2:4
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.

ಮತ್ತಾಯನು 13:40
ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.

ಮತ್ತಾಯನು 7:23
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.

ಮತ್ತಾಯನು 3:12
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯನು 13:42
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.

2 ಥೆಸಲೊನೀಕದವರಿಗೆ 1:9
ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.

ಮತ್ತಾಯನು 13:50
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.

ಮತ್ತಾಯನು 25:46
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಮಾರ್ಕನು 9:43
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;

ಲೂಕನು 16:24
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.

ಯೋಹಾನನು 8:44
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ

ಇಬ್ರಿಯರಿಗೆ 6:8
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

ಪ್ರಕಟನೆ 14:10
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಯೆಶಾಯ 66:24
ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.

ಪ್ರಕಟನೆ 20:10
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಧರ್ಮೋಪದೇಶಕಾಂಡ 28:16
ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;

ಕೀರ್ತನೆಗಳು 6:8
ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;

ಕೀರ್ತನೆಗಳು 119:21
ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.

ಕೀರ್ತನೆಗಳು 119:115
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.

ಕೀರ್ತನೆಗಳು 139:19
ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.

ಯೆರೆಮಿಯ 17:5
ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು.

ಮತ್ತಾಯನು 5:22
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

ಮತ್ತಾಯನು 18:8
ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.

ಲೂಕನು 13:27
ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ.

ರೋಮಾಪುರದವರಿಗೆ 9:22
ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು

ಗಲಾತ್ಯದವರಿಗೆ 3:10
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.

1 ಯೋಹಾನನು 3:10
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.

ಪ್ರಕಟನೆ 12:7
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.

ಧರ್ಮೋಪದೇಶಕಾಂಡ 27:15
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್‌ ಎಂದು ಹೇಳಲಿ.