ಪ್ರಕಟನೆ 9:21 in Kannada

ಕನ್ನಡ ಕನ್ನಡ ಬೈಬಲ್ ಪ್ರಕಟನೆ ಪ್ರಕಟನೆ 9 ಪ್ರಕಟನೆ 9:21

Revelation 9:21
ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.

Revelation 9:20Revelation 9

Revelation 9:21 in Other Translations

King James Version (KJV)
Neither repented they of their murders, nor of their sorceries, nor of their fornication, nor of their thefts.

American Standard Version (ASV)
and they repented not of their murders, nor of their sorceries, nor of their fornication, nor of their thefts.

Bible in Basic English (BBE)
And they had no regret for putting men to death, or for their use of secret arts, or for the evil desires of the flesh, or for taking the property of others.

Darby English Bible (DBY)
And they repented not of their murders, nor of their witchcrafts, nor of their fornication, nor of their thefts.

World English Bible (WEB)
They didn't repent of their murders, nor of their sorceries,{The word for "sorceries" (pharmakeia) also implies the use of potions, poisons, and drugs} nor of their sexual immorality, nor of their thefts.

Young's Literal Translation (YLT)
yea they did not reform from their murders, nor from their sorceries, nor from their whoredoms, nor from their thefts.

Neither
καὶkaikay

they
οὐouoo
repented
μετενόησανmetenoēsanmay-tay-NOH-ay-sahn
of
ἐκekake
their
τῶνtōntone

φόνωνphonōnFOH-none
murders,
αὐτῶνautōnaf-TONE
nor
οὔτεouteOO-tay
of
ἐκekake
their
τῶνtōntone

φαρμακειῶνpharmakeiōnfahr-ma-kee-ONE
sorceries,
αὐτῶνautōnaf-TONE
nor
οὔτεouteOO-tay
of
ἐκekake
their
τῆςtēstase

πορνείαςporneiaspore-NEE-as
fornication,
αὐτῶνautōnaf-TONE
nor
οὔτεouteOO-tay
of
ἐκekake
their
τῶνtōntone

κλεμμάτωνklemmatōnklame-MA-tone
thefts.
αὐτῶνautōnaf-TONE

Cross Reference

ಪ್ರಕಟನೆ 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಪ್ರಕಟನೆ 17:5
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.

ಪ್ರಕಟನೆ 17:2
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.

ಯೆಶಾಯ 47:9
ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.

ಯೆಶಾಯ 47:12
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

ಪ್ರಕಟನೆ 22:15
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

ಪ್ರಕಟನೆ 19:2
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.

ಪ್ರಕಟನೆ 18:23
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.

ಪ್ರಕಟನೆ 18:3
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

ಪ್ರಕಟನೆ 16:6
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.

ಪ್ರಕಟನೆ 14:8
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 13:15
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.

ದಾನಿಯೇಲನು 7:21
ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;

ದಾನಿಯೇಲನು 11:33
ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.

ಮಲಾಕಿಯ 3:5
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯನು 15:19
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.

2 ಕೊರಿಂಥದವರಿಗೆ 12:21
ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.

ಗಲಾತ್ಯದವರಿಗೆ 5:20
ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು

ಪ್ರಕಟನೆ 11:7
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.

ಪ್ರಕಟನೆ 13:7
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.

ಪ್ರಕಟನೆ 13:13
ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.

ಯೆಶಾಯ 57:3
ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.