Skip to content
CHRIST SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Proverbs 29 KJV ASV BBE DBY WBT WEB YLT

Proverbs 29 in Kannada WBT Compare Webster's Bible

Proverbs 29

1 ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.

2 ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.

3 ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.

4 ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.

5 ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.

6 ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.

7 ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.

8 ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.

9 ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.

10 ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.

11 ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.

12 ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.

13 ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.

14 ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

15 ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

16 ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

17 ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.

18 ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.

19 ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.

20 ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.

21 ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.

22 ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.

23 ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.

24 ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.

25 ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.

26 ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.

27 ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close