Genesis 3:15 ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
Genesis 3:15 in Other Translations
King James Version (KJV) And I will put enmity between thee and the woman, and between thy seed and her seed; it shall bruise thy head, and thou shalt bruise his heel.
American Standard Version (ASV) and I will put enmity between thee and the woman, and between thy seed and her seed: he shall bruise thy head, and thou shalt bruise his heel.
Bible in Basic English (BBE) And there will be war between you and the woman and between your seed and her seed: by him will your head be crushed and by you his foot will be wounded.
Darby English Bible (DBY) And I will put enmity between thee and the woman, and between thy seed and her seed; he shall crush thy head, and thou shalt crush his heel.
Webster's Bible (WBT) And I will put enmity between thee and the woman, and between thy seed and her seed: it shall bruise thy head, and thou shalt bruise his heel.
World English Bible (WEB) I will put enmity between you and the woman, and between your offspring and her offspring. He will bruise your head, and you will bruise his heel."
Young's Literal Translation (YLT) and enmity I put between thee and the woman, and between thy seed and her seed; he doth bruise thee -- the head, and thou dost bruise him -- the heel.'
Read Full Chapter :
Genesis 3
Cross Reference
ರೋಮಾಪುರದವರಿಗೆ 16:20
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
1 ಯೋಹಾನನು 3:8
ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ಪ್ರಕಟನೆ 12:17
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
ಗಲಾತ್ಯದವರಿಗೆ 4:4
ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
ಯೆಶಾಯ 7:14
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಯೋಹಾನನು 8:44
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ಮತ್ತಾಯನು 1:23
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಯೆಶಾಯ 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಲೂಕನು 1:31
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಪ್ರಕಟನೆ 12:7
ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
ಕೀರ್ತನೆಗಳು 132:11
ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
ಯೆರೆಮಿಯ 31:22
ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
ಮತ್ತಾಯನು 13:38
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಅಪೊಸ್ತಲರ ಕೃತ್ಯಗ 13:10
ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
ಮತ್ತಾಯನು 1:25
ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
ಮಿಕ 5:3
ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
1 ಯೋಹಾನನು 3:10
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
ಇಬ್ರಿಯರಿಗೆ 2:14
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
ಪ್ರಕಟನೆ 2:10
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಪ್ರಕಟನೆ 13:7
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
ಪ್ರಕಟನೆ 20:1
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.
ಪ್ರಕಟನೆ 20:10
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಯೆಶಾಯ 53:12
ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಇಬ್ರಿಯರಿಗೆ 5:7
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ಆದಿಕಾಂಡ 49:17
ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ಅರಣ್ಯಕಾಂಡ 21:6
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ದಾನಿಯೇಲನು 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
ಆಮೋಸ 9:3
ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ಮತ್ತಾಯನು 4:1
1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
ಮತ್ತಾಯನು 12:34
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
ಮಾರ್ಕನು 16:18
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
ಲೂಕನು 10:19
ಇಗೋ, ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು.
ಲೂಕನು 22:39
ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
ಲೂಕನು 22:53
ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ಯೋಹಾನನು 12:31
ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
ಯೋಹಾನನು 14:30
ಇನ್ನು ಮೇಲೆ ನಾನು ನಿಮ್ಮೊಂದಿಗೆ ಬಹಳವಾಗಿ ಮಾತನಾಡುವದಿಲ್ಲ; ಯಾಕಂದರೆ ಇಹ ಲೋಕದ ಅಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ನನ್ನಲ್ಲಿ ಏನೂ ಇಲ್ಲ.
ಅಪೊಸ್ತಲರ ಕೃತ್ಯಗ 28:3
ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
ಎಫೆಸದವರಿಗೆ 4:8
ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ಕೊಲೊಸ್ಸೆಯವರಿಗೆ 2:15
ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ಇಬ್ರಿಯರಿಗೆ 2:18
ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
1 ಯೋಹಾನನು 5:5
ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
ಪ್ರಕಟನೆ 15:1
ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
ಪ್ರಕಟನೆ 20:7
ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.
ರೋಮಾಪುರದವರಿಗೆ 3:13
ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ.
ಲೂಕನು 1:76
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಮತ್ತಾಯನು 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
ಮತ್ತಾಯನು 3:7
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?