Hebrews 6:2 in Kannada

Kannada Kannada Bible Hebrews Hebrews 6 Hebrews 6:2

Hebrews 6:2
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.

Hebrews 6:1Hebrews 6Hebrews 6:3

Hebrews 6:2 in Other Translations

King James Version (KJV)
Of the doctrine of baptisms, and of laying on of hands, and of resurrection of the dead, and of eternal judgment.

American Standard Version (ASV)
of the teaching of baptisms, and of laying on of hands, and of resurrection of the dead, and of eternal judgment.

Bible in Basic English (BBE)
The teaching of baptisms, and of the putting on of hands, and of the future life of the dead, and of the judging on the last day.

Darby English Bible (DBY)
of [the] doctrine of washings, and of imposition of hands, and of resurrection of [the] dead, and of eternal judgment;

World English Bible (WEB)
of the teaching of baptisms, of laying on of hands, of resurrection of the dead, and of eternal judgment.

Young's Literal Translation (YLT)
of the teaching of baptisms, of laying on also of hands, of rising again also of the dead, and of judgment age-during,

Of
the
doctrine
βαπτισμῶνbaptismōnva-ptee-SMONE
of
baptisms,
διδαχῆςdidachēsthee-tha-HASE
and
ἐπιθέσεώςepitheseōsay-pee-THAY-say-OSE
of
laying
on
τεtetay
hands,
of
χειρῶνcheirōnhee-RONE
and
ἀναστάσεώςanastaseōsah-na-STA-say-OSE
of
resurrection
τεtetay
dead,
the
of
νεκρῶνnekrōnnay-KRONE
and
καὶkaikay
of
eternal
κρίματοςkrimatosKREE-ma-tose
judgment.
αἰωνίουaiōniouay-oh-NEE-oo

Cross Reference

ಅಪೊಸ್ತಲರ ಕೃತ್ಯಗ 17:31
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.

ಅಪೊಸ್ತಲರ ಕೃತ್ಯಗ 6:6
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.

ಅಪೊಸ್ತಲರ ಕೃತ್ಯಗ 17:18
ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ

1 ಕೊರಿಂಥದವರಿಗೆ 10:2
ಅವರೆಲ್ಲರೂ ಮೋಶೆ ಗಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಬಾಪ್ತಿಸ್ಮ ಹೊಂದಿದರು;

1 ಕೊರಿಂಥದವರಿಗೆ 1:12
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.

ರೋಮಾಪುರದವರಿಗೆ 6:3
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?

ರೋಮಾಪುರದವರಿಗೆ 2:16
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.

ರೋಮಾಪುರದವರಿಗೆ 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

ಅಪೊಸ್ತಲರ ಕೃತ್ಯಗ 26:8
ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ಅಪೊಸ್ತಲರ ಕೃತ್ಯಗ 24:25
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.

ಅಪೊಸ್ತಲರ ಕೃತ್ಯಗ 24:21
ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು.

ಅಪೊಸ್ತಲರ ಕೃತ್ಯಗ 24:15
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.

ಅಪೊಸ್ತಲರ ಕೃತ್ಯಗ 23:6
ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ

ಅಪೊಸ್ತಲರ ಕೃತ್ಯಗ 19:2
ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.

1 ಕೊರಿಂಥದವರಿಗೆ 12:13
ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.

1 ಕೊರಿಂಥದವರಿಗೆ 15:13
ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಕ್ರಿಸ್ತನಾದರೂ ಎದ್ದು ಬರಲಿಲ್ಲ.

ಪ್ರಕಟನೆ 20:10
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಯೂದನು 1:14
ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು

2 ಪೇತ್ರನು 3:7
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.

1 ಪೇತ್ರನು 3:20
ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.

ಇಬ್ರಿಯರಿಗೆ 11:35
ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರಿಗಿ ಹೊಂದಿದರು; ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿದರು.

ಇಬ್ರಿಯರಿಗೆ 9:10
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

2 ತಿಮೊಥೆಯನಿಗೆ 2:18
ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.

1 ಥೆಸಲೊನೀಕದವರಿಗೆ 4:14
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.

ಕೊಲೊಸ್ಸೆಯವರಿಗೆ 2:12
ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.

ಫಿಲಿಪ್ಪಿಯವರಿಗೆ 3:21
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

2 ಕೊರಿಂಥದವರಿಗೆ 5:10
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.

ಅಪೊಸ್ತಲರ ಕೃತ್ಯಗ 16:33
ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.

ಅಪೊಸ್ತಲರ ಕೃತ್ಯಗ 16:15
ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.

ಅಪೊಸ್ತಲರ ಕೃತ್ಯಗ 13:3
ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.

ಲೂಕನು 3:16
ಆಗ ಯೋಹಾನನು ಪ್ರತ್ಯುತ್ತರವಾಗಿ ಅವರೆಲ್ಲ ರಿಗೆ--ನಾನಂತೂ ನಿಮಗೆ ನೀರಿನ ಬಾಪ್ತಿಸ್ಮ ಮಾಡಿಸು ವದು ನಿಜವೇ; ಆದರೆ ನನಗಿಂತ ಶಕ್ತನೊಬ್ಬನು ಬರು ತ್ತಾನೆ; ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಿಂದಲೂ ಬೆಂಕಿಯಿಂ ದಲೂ ನಿಮಗೆ ಬಾಪ್ತಿಸ್ಮ ಮಾಡಿಸುವನು

ಮಾರ್ಕನು 16:16
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

ಮಾರ್ಕನು 7:8
ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು.

ಮಾರ್ಕನು 7:4
ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಮತ್ತಾಯನು 25:31
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;

ಮತ್ತಾಯನು 22:23
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--

ಮತ್ತಾಯನು 20:22
ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ

ಮತ್ತಾಯನು 3:14
ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.

ದಾನಿಯೇಲನು 12:2
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಯೆಹೆಜ್ಕೇಲನು 37:1
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

ಯೆಶಾಯ 26:19
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

ಲೂಕನು 11:38
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.

ಲೂಕನು 12:50
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!

ಅಪೊಸ್ತಲರ ಕೃತ್ಯಗ 10:47
ನಮ್ಮ ಹಾಗೆಯೇ ಪವಿತ್ರಾತ್ಮನನ್ನು ಹೊಂದಿದ ಇವರಿಗೆ ನೀರಿನ ಬಾಪ್ತಿಸ್ಮವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ--

ಅಪೊಸ್ತಲರ ಕೃತ್ಯಗ 8:36
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಅಪೊಸ್ತಲರ ಕೃತ್ಯಗ 8:12
ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.

ಅಪೊಸ್ತಲರ ಕೃತ್ಯಗ 4:2
ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.

ಅಪೊಸ್ತಲರ ಕೃತ್ಯಗ 2:41
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಯೋಹಾನನು 11:24
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.

ಯೋಹಾನನು 5:29
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.

ಯೋಹಾನನು 4:1
ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಬಾಪ್ತಿಸ್ಮ ಮಾಡಿಸುತ್ತಿದ್ದದ್ದು ಫರಿಸಾಯರು ಕೇಳಿದ್ದಾರೆಂದು ಕರ್ತ ನಿಗೆ ಗೊತ್ತಾಯಿತು.

ಯೋಹಾನನು 3:25
ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

ಯೋಹಾನನು 1:33
ನಾನು ಆತನನ್ನು ಅರಿತಿರಲಿಲ್ಲ; ಆದರೆ ನೀರಿನಿಂದ ಬಾಪ್ತಿಸ್ಮ ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನೇ ನನಗೆ-- ಯಾವಾತನ ಮೇಲೆ ಆತ್ಮನು ಇಳಿದು ನೆಲೆಯಾಗಿರು ವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮ ನಿಂದ ಬಾಪ್ತಿಸ್ಮ ಮಾಡಿಸುವಾತನು ಎಂದು ಹೇಳಿದನು.

ಲೂಕನು 14:14
ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.

ಪ್ರಸಂಗಿ 12:14
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.