Jeremiah 22:21 in Kannada

Kannada Kannada Bible Jeremiah Jeremiah 22 Jeremiah 22:21

Jeremiah 22:21
ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.

Jeremiah 22:20Jeremiah 22Jeremiah 22:22

Jeremiah 22:21 in Other Translations

King James Version (KJV)
I spake unto thee in thy prosperity; but thou saidst, I will not hear. This hath been thy manner from thy youth, that thou obeyedst not my voice.

American Standard Version (ASV)
I spake unto thee in thy prosperity; but thou saidst, I will not hear. This hath been thy manner from thy youth, that thou obeyedst not my voice.

Bible in Basic English (BBE)
My word came to you in the time of your well-being; but you said, I will not give ear. This has been your way from your earliest years, you did not give attention to my voice.

Darby English Bible (DBY)
I spoke unto thee in thy prosperity; [but] thou saidst, I will not hear. This hath been thy way from thy youth, that thou hearkenedst not unto my voice.

World English Bible (WEB)
I spoke to you in your prosperity; but you said, I will not hear. This has been your manner from your youth, that you didn't obey my voice.

Young's Literal Translation (YLT)
I have spoken unto thee in thine ease, Thou hast said, `I do not hearken,' This `is' thy way from thy youth, For thou hast not hearkened to My voice.

I
spake
דִּבַּ֤רְתִּיdibbartîdee-BAHR-tee
unto
אֵלַ֙יִךְ֙ʾēlayikay-LA-yeek
thee
in
thy
prosperity;
בְּשַׁלְוֹתַ֔יִךְbĕšalwōtayikbeh-sha-l-oh-TA-yeek
saidst,
thou
but
אָמַ֖רְתְּʾāmarĕtah-MA-ret
I
will
not
לֹ֣אlōʾloh
hear.
אֶשְׁמָ֑עʾešmāʿesh-MA
This
זֶ֤הzezeh
hath
been
thy
manner
דַרְכֵּךְ֙darkēkdahr-kake
youth,
thy
from
מִנְּעוּרַ֔יִךְminnĕʿûrayikmee-neh-oo-RA-yeek
that
כִּ֥יkee
thou
obeyedst
לֹֽאlōʾloh
not
שָׁמַ֖עַתְּšāmaʿatsha-MA-at
my
voice.
בְּקוֹלִֽי׃bĕqôlîbeh-koh-LEE

Cross Reference

ಯೆರೆಮಿಯ 32:30
ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 3:25
ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.

ಙ್ಞಾನೋಕ್ತಿಗಳು 30:9
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.

ಯೆಶಾಯ 48:8
ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.

ಯೆರೆಮಿಯ 7:22
ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.

ಯೆಹೆಜ್ಕೇಲನು 23:3
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.

ಯೆಹೆಜ್ಕೇಲನು 20:28
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ಯೆಹೆಜ್ಕೇಲನು 20:21
ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.

ಯೆಹೆಜ್ಕೇಲನು 20:13
ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.

ಯೆಹೆಜ್ಕೇಲನು 20:8
ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.

ಯೆರೆಮಿಯ 36:21
ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು.

ಯೆರೆಮಿಯ 35:15
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

ಯೆರೆಮಿಯ 6:16
ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.

ಧರ್ಮೋಪದೇಶಕಾಂಡ 9:24
ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.

ಧರ್ಮೋಪದೇಶಕಾಂಡ 31:27
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ಧರ್ಮೋಪದೇಶಕಾಂಡ 32:15
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ನ್ಯಾಯಸ್ಥಾಪಕರು 2:11
ಇಸ್ರಾಯೇಲ್‌ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ

2 ಪೂರ್ವಕಾಲವೃತ್ತಾ 33:10
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.

2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ನೆಹೆಮಿಯ 9:16
ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು.

ಕೀರ್ತನೆಗಳು 106:6
ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.

ಯೆರೆಮಿಯ 2:31
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.

ಧರ್ಮೋಪದೇಶಕಾಂಡ 9:7
ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.