Mark 16:16 in Kannada

Kannada Kannada Bible Mark Mark 16 Mark 16:16

Mark 16:16
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.

Mark 16:15Mark 16Mark 16:17

Mark 16:16 in Other Translations

King James Version (KJV)
He that believeth and is baptized shall be saved; but he that believeth not shall be damned.

American Standard Version (ASV)
He that believeth and is baptized shall be saved; but he that disbelieveth shall be condemned.

Bible in Basic English (BBE)
He who has faith and is given baptism will get salvation; but he who has not faith will be judged.

Darby English Bible (DBY)
He that believes and is baptised shall be saved, and he that disbelieves shall be condemned.

World English Bible (WEB)
He who believes and is baptized will be saved; but he who disbelieves will be condemned.

Young's Literal Translation (YLT)
he who hath believed, and hath been baptized, shall be saved; and he who hath not believed, shall be condemned.

He
hooh
that
believeth
πιστεύσαςpisteusaspee-STAYF-sahs
and
καὶkaikay
is
baptized
βαπτισθεὶςbaptistheisva-ptee-STHEES
saved;
be
shall
σωθήσεταιsōthēsetaisoh-THAY-say-tay
but
hooh
he
δὲdethay
that
believeth
not
ἀπιστήσαςapistēsasah-pee-STAY-sahs
shall
be
damned.
κατακριθήσεταιkatakrithēsetaika-ta-kree-THAY-say-tay

Cross Reference

ಯೋಹಾನನು 3:36
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.

ರೋಮಾಪುರದವರಿಗೆ 10:9
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.

ಯೋಹಾನನು 3:18
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

ಅಪೊಸ್ತಲರ ಕೃತ್ಯಗ 2:38
ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.

ಯೋಹಾನನು 8:24
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.

ಯೋಹಾನನು 3:15
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.

ಪ್ರಕಟನೆ 20:15
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

1 ಯೋಹಾನನು 5:10
ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.

1 ಪೇತ್ರನು 3:21
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).

ಯೋಹಾನನು 5:24
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.

ಯೋಹಾನನು 12:46
ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.

ಯೋಹಾನನು 6:29
ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.

ಮಾರ್ಕನು 1:15
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು.

ಯೋಹಾನನು 3:5
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

1 ಪೇತ್ರನು 1:21
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಪ್ರಕಟನೆ 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.

ಲೂಕನು 8:12
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.

ಯೋಹಾನನು 6:35
ಅದಕ್ಕೆ ಯೇಸು ಅವರಿಗೆ--ನಾನೇ ಆ ಜೀವದ ರೊಟ್ಟಿ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ ಮತ್ತು ನನ್ನ ಮೇಲೆ ನಂಬಿಕೆ ಇಡುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.

ಯೋಹಾನನು 6:40
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.

ಯೋಹಾನನು 11:25
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;

ಯೋಹಾನನು 20:31
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.

ಅಪೊಸ್ತಲರ ಕೃತ್ಯಗ 2:41
ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.

ಅಪೊಸ್ತಲರ ಕೃತ್ಯಗ 10:43
ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

ಅಪೊಸ್ತಲರ ಕೃತ್ಯಗ 16:30
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

ಅಪೊಸ್ತಲರ ಕೃತ್ಯಗ 22:16
ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.

2 ಥೆಸಲೊನೀಕದವರಿಗೆ 2:12
ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.

2 ಥೆಸಲೊನೀಕದವರಿಗೆ 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;

ಯೋಹಾನನು 7:37
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.

ಯೋಹಾನನು 1:12
ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.

ಇಬ್ರಿಯರಿಗೆ 10:38
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.

ರೋಮಾಪುರದವರಿಗೆ 4:24
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗ 8:36
ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು.

ಅಪೊಸ್ತಲರ ಕೃತ್ಯಗ 13:46
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೊಸ್ತಲರ ಕೃತ್ಯಗ 13:39
ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.

ರೋಮಾಪುರದವರಿಗೆ 3:6
ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?