Cross Reference
ಲೂಕನು 6:23
ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.
1 ಪೇತ್ರನು 4:13
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ಯಾಕೋಬನು 1:2
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
ರೋಮಾಪುರದವರಿಗೆ 5:3
ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
ಮತ್ತಾಯನು 16:27
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.
ಕೊಲೊಸ್ಸೆಯವರಿಗೆ 1:24
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
2 ಪೂರ್ವಕಾಲವೃತ್ತಾ 36:16
ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
ಯೆರೆಮಿಯ 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಆದಿಕಾಂಡ 15:1
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ರೂತಳು 2:12
ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
1 ಅರಸುಗಳು 18:13
ಈಜೆಬೆಲಳು ಕರ್ತನ ಪ್ರವಾದಿಗಳನ್ನು ಕೊಂದುಹಾಕಿದಾಗ ನಾನು ಕರ್ತನ ಪ್ರವಾದಿಗಳಲ್ಲಿ ನೂರು ಮಂದಿಯನ್ನು ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು ಅವ ರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನಿನಗೆ ಹೇಳಲ್ಪಟ್ಟದ್ದಿಲ್ಲವೋ?
1 ಅರಸುಗಳು 22:26
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
ಕೀರ್ತನೆಗಳು 58:11
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಙ್ಞಾನೋಕ್ತಿಗಳು 11:18
ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
ಯೆಶಾಯ 3:10
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಯೆರೆಮಿಯ 26:21
ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
ಮತ್ತಾಯನು 6:16
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
ಮತ್ತಾಯನು 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
ಅಪೊಸ್ತಲರ ಕೃತ್ಯಗ 5:41
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
ಅಪೊಸ್ತಲರ ಕೃತ್ಯಗ 16:25
ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
1 ಕೊರಿಂಥದವರಿಗೆ 3:8
ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
ಫಿಲಿಪ್ಪಿಯವರಿಗೆ 2:17
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ಕೊಲೊಸ್ಸೆಯವರಿಗೆ 3:24
ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.
1 ಥೆಸಲೊನೀಕದವರಿಗೆ 2:15
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
ಇಬ್ರಿಯರಿಗೆ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ಲೂಕನು 6:35
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
2 ಅರಸುಗಳು 1:9
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
1 ಅರಸುಗಳು 22:8
ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟ ನಿಗೆ -- ನಾವು ಕರ್ತನನ್ನು ವಿಚಾರಿಸುವ ಹಾಗೆ ಇಮ್ಲನ ಮಗನಾದ ವಿಾಕಾಯೆಹುನೆಂಬ ಇನ್ನೊಬ್ಬನಿದ್ದಾನೆ; ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಯಾಕಂದರೆ ಅವನು ನನ್ನನ್ನು ಕುರಿತು ಒಳ್ಳೇದನ್ನಲ್ಲ, ಕೆಟ್ಟದ್ದನ್ನು ಪ್ರವಾದಿಸುತ್ತಾನೆ ಅಂದನು. ಅದಕ್ಕೆ ಯೆಹೋಷಾಫಾಟನು--ಅರಸನು ಹಾಗೆ ಹೇಳದಿರಲಿ ಅಂದನು.
1 ಅರಸುಗಳು 18:4
ಈಜೆಬೆ ಲಳು ಕರ್ತನ ಪ್ರವಾದಿಗಳನ್ನು ಕೊಲ್ಲುವಾಗ ಓಬ ದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು ಐವತ್ತು ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು ಅವರಿಗೆ ಆಹಾರವನ್ನೂ ನೀರನ್ನೂ ಕೊಟ್ಟು ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.)
ನೆಹೆಮಿಯ 9:26
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಕೀರ್ತನೆಗಳು 19:11
ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
ಯೆರೆಮಿಯ 26:8
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
ಮತ್ತಾಯನು 6:1
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
ಮತ್ತಾಯನು 6:4
ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
ಮತ್ತಾಯನು 10:41
ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.
ಮತ್ತಾಯನು 23:31
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಲೂಕನು 11:47
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
ಲೂಕನು 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ
ಅಪೊಸ್ತಲರ ಕೃತ್ಯಗ 7:51
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
2 ಕೊರಿಂಥದವರಿಗೆ 4:17
ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.
ಇಬ್ರಿಯರಿಗೆ 11:26
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
1 ಅರಸುಗಳು 21:20
ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು;
1 ಅರಸುಗಳು 19:10
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
1 ಅರಸುಗಳು 19:2
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
2 ಪೂರ್ವಕಾಲವೃತ್ತಾ 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
2 ಪೂರ್ವಕಾಲವೃತ್ತಾ 24:20
ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.