Cross Reference
ಕೀರ್ತನೆಗಳು 72:1
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಕೀರ್ತನೆಗಳು 110:1
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಕೀರ್ತನೆಗಳು 118:22
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಅಪೊಸ್ತಲರ ಕೃತ್ಯಗ 13:33
ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ.
ಲೂಕನು 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
ಜೆಕರ್ಯ 11:8
ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
ಜೆಕರ್ಯ 12:10
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
ಜೆಕರ್ಯ 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಕೀರ್ತನೆಗಳು 16:9
ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
ಲೂಕನು 9:44
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
ಲೂಕನು 24:26
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
ಯೋಹಾನನು 5:46
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.
ಮತ್ತಾಯನು 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
ಕೀರ್ತನೆಗಳು 22:1
ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
ಕೀರ್ತನೆಗಳು 69:1
ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.
ಜೆಕರ್ಯ 6:12
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಜೆಕರ್ಯ 9:9
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಯೆಶಾಯ 42:1
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಯೆಶಾಯ 49:1
1 ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಯೆಶಾಯ 50:2
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಯೆಶಾಯ 52:13
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ಯೆಶಾಯ 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಯೆರೆಮಿಯ 23:5
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಯೆರೆಮಿಯ 33:14
ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯವರ ಸಂಗಡಲೂ ಯೆಹೂದನ ಮನೆಯವರ ಸಂಗಡಲೂ ವಾಗ್ದಾನವನ್ನು ಮಾಡಿದಂತೆ ಒಳ್ಳೇ ಮಾತನ್ನು ನೆರೆವೇರಿ ಸುವೆನು.
ಯೆಹೆಜ್ಕೇಲನು 17:22
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಯೆಹೆಜ್ಕೇಲನು 34:23
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ದಾನಿಯೇಲನು 2:44
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ದಾನಿಯೇಲನು 7:13
ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು.
ದಾನಿಯೇಲನು 9:24
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಹೋಶೇ 1:7
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಹೋಶೇ 3:5
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಯೋವೇಲ 2:28
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆಮೋಸ 9:11
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಮಿಕ 5:1
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
ಹಗ್ಗಾಯ 2:7
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಜೆಕರ್ಯ 14:4
ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
ಮಲಾಕಿಯ 3:1
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಮಲಾಕಿಯ 4:2
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಮತ್ತಾಯನು 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
ಮತ್ತಾಯನು 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಮತ್ತಾಯನು 26:54
ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
ಮತ್ತಾಯನು 26:56
ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
ಮಾರ್ಕನು 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
ಮಾರ್ಕನು 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
ಮಾರ್ಕನು 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
ಲೂಕನು 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
ಲೂಕನು 21:22
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಲೂಕನು 22:37
ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಲೂಕನು 24:6
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಲೂಕನು 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
ಯೋಹಾನನು 3:14
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.
ಯೋಹಾನನು 5:39
ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
ಆದಿಕಾಂಡ 3:15
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ಯೋಹಾನನು 16:16
ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
ಯೋಹಾನನು 17:11
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ಯೋಹಾನನು 19:24
ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
ಅಪೊಸ್ತಲರ ಕೃತ್ಯಗ 3:18
ಕ್ರಿಸ್ತನು ಬಾಧೆಪಡ ಬೇಕೆಂದು ದೇವರು ಮುಂದಾಗಿ ತನ್ನ ಎಲ್ಲಾ ಪ್ರವಾದಿ ಗಳ ಬಾಯಿಂದ ಹೇಳಿಸಿದವುಗಳನ್ನು ಹೀಗೆ ನೆರವೇರಿ ಸಿದನು.
ಅಪೊಸ್ತಲರ ಕೃತ್ಯಗ 3:22
ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ಅಪೊಸ್ತಲರ ಕೃತ್ಯಗ 7:37
ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
ಅಪೊಸ್ತಲರ ಕೃತ್ಯಗ 13:29
ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
ಅಪೊಸ್ತಲರ ಕೃತ್ಯಗ 17:2
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
1 ಕೊರಿಂಥದವರಿಗೆ 15:3
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
ಇಬ್ರಿಯರಿಗೆ 3:5
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ಇಬ್ರಿಯರಿಗೆ 7:1
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
ಇಬ್ರಿಯರಿಗೆ 9:8
ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
ಇಬ್ರಿಯರಿಗೆ 10:1
ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
1 ಪೇತ್ರನು 1:11
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
ಪ್ರಕಟನೆ 19:10
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
ಯೋಹಾನನು 16:4
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಆದಿಕಾಂಡ 14:18
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
ಆದಿಕಾಂಡ 22:18
ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ಆದಿಕಾಂಡ 49:10
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಯಾಜಕಕಾಂಡ 16:2
ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
ಅರಣ್ಯಕಾಂಡ 21:8
ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು.
ಅರಣ್ಯಕಾಂಡ 35:25
ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.
ಧರ್ಮೋಪದೇಶಕಾಂಡ 18:15
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
ಕೀರ್ತನೆಗಳು 2:1
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಕೀರ್ತನೆಗಳು 40:6
ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
ಕೀರ್ತನೆಗಳು 88:1
ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
ಕೀರ್ತನೆಗಳು 109:4
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಯೆಶಾಯ 7:14
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಯೆಶಾಯ 9:6
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಯೆಶಾಯ 11:1
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಯೆಶಾಯ 28:16
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಯೆಶಾಯ 40:1
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.